*ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪರಬೃಹತ್ ಪ್ರತಿಭಟನೆ*ಹಾವಿನ ದ್ವೇಷ 12ವರ್ಷ ಸೌಜನ್ಯ ಪ್ರಕರಣ12ನೇ ವರ್ಷ.ತಿಮರೋಡಿ

ಸೌಜನ್ಯ ಳ ತಾಯಿ ಕುಸುಮಾವತಿ ಮಾತನಾಡಿ ಮಧ್ಯಾಹ್ನ ಊಟಕ್ಕೆ ಮನೆಗೆ ಬರ್ತೇನೆ ಎಂದು ಹೇಳಿದವಳು ಮತ್ತೆ ಮನೆಗೆ ಬರಲಿಲ್ಲ. ಅತ್ಯಾಚಾರಿಗಳು ಅತ್ಯಾಚಾರ ಮಾಡಿ ಕೊಂದು ಬಿಸಾಕಿದ್ದಾರೆ. ಮರುದಿನ ದೇಹ ಸಿಕ್ಕಿದೆ. ನನ್ನ ಮಗಳಂತೆ ಅತ್ಯಾಚಾರಕ್ಕೊಳಗಾದ ಎಲ್ಲರಿಗೂ ನ್ಯಾಯ ಸಿಗಲಿ, ಯಾರೂ ಕೈ ಬಿಡಬೇಡಿ ನ್ಯಾಯ ತೆಗೆಸಿಕೊಡಿ ಎಂದು ಕೇಳಿಕೊಂಡರು.

ಸಾಮಾಜಿಕ ಹೋರಾಟಗಾರ ಲಕ್ಷ್ಮೀಶ ಗಬಲಡ್ಕ ಮಾತನಾಡಿದರು. ಕುಮಾರಧಾರ ಬಳಿಯಿಂದ ಮೌನ ಮೆರವಣಿಗೆ ಆರಂಭಗೊಂಡಿದ್ದು ತಿಮರೋಡಿಯವರು ತೆಂಗಿನಕಾಯಿ ಕಾಯಿ ಒಡೆದು ಚಾಲನೆ ನೀಡಿದರು.

ಪರ ಹೋರಾಟ

ಮೌನ ಮೆರವಣಿಗೆಯಲ್ಲಿ ಸಾವಿರಕ್ಕೂ ಮಿಕ್ಕಿ ಜನ ಪಾಲ್ಗೊಂಡರು. ಮೆರವಣಿಗೆಯಲ್ಲಿ ಕಾಶಿಕಟ್ಟೆ ಬಳಿಯಲ್ಲೂ ತಂಗಿನಕಾಯಿ

ಒಡೆಯಲಾಯಿತು. ರಥಬೀದಿ ಬಳಿ ಸಭಾಕಾರ್ಯಕ್ರಮ ನಡೆದಿದ್ದು ತಿಮರೋಡಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಹೋರಾಟ ಸಮಿತಿ ಅಧ್ಯಕ್ಷ ರವಿ ಕಕ್ಕೆಪದವು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗೋಪಾಲ ಎಣ್ಣೆಮಜಲು ಸ್ವಾಗತಿಸಿದರು, ದಿನೇಶ್‌

ಸಂಪ್ಯಾಡಿ ವಂದಿಸಿದರು. ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರ್ವಹಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ

ಸಭೆ ಬಳಿಕ ರಾಜಗೋಪುರದ ಎದುರು ಭಾಗ ಸಾಮೂಹಿಕ ಪ್ರಾರ್ಥನೆ ನೆರವೇರಿಸಲಾಯಿತು. ಪ್ರಭಾಕರ ಪಡೆ ಪ್ರಾರ್ಥನೆ ಓದಿದರು. ಬಳಿಕ

ದೇವಸ್ಥಾನಕ್ಕೆ ಸಂಘಟಕರು, ಮಹೇಶ್ ತಿಮ್ಮರೋಡಿ ಹಾಗೂ ಕುಸುಮಾವತಿ ತೆರಳಿ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದರು.

ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರೋಟರಿ ಕ್ಲಬ್ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಅಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ,ರವಿಕಕ್ಕೆಪದವು ಸಮಾಜ ಸೇವ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *