ಕುಕ್ಕೆ ಸುಬ್ರಮಣ್ಯ ಸ್ವಚ್ಛತಾ ಕಾರ್ಯದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ತಂಡ.

ಕುಕ್ಕೆ ಸುಬ್ರಮಣ್ಯ ಮಾ.24: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಏರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ.

ಅಂತೆ ಇದೀಗ ನಿರಂತರವಾಗಿ ಪುಣ್ಯಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳು ಮಾರ್ಗದ ಇಕ್ಕಲೆಗಳಲ್ಲಿ ಕಸ ಕಡ್ಡಿಗಳನ್ನು ಎಸೆದಿರುವುದು ಗಮನಕ್ಕೆ ಬಂದಿರುತ್ತದೆ. ಇದನ್ನು ಮನ ಗಂಡ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ಅವರ ಮಾರ್ಗದರ್ಶನದಲ್ಲಿ ಇಂದಿನ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿರುವರು. ಸುಮಾರು 50ಕ್ಕೂ ಮಿಕ್ಕಿ ಸ್ವಯಂ ಸೇವಕರು ದೇವರ ಸೇವೆ ಎಂದೆ ಭಾವಿಸಿ ನಿರಂತರವಾಗಿ ಪ್ರತಿ ವಾರದ ಆದಿತ್ಯವಾರದಂದು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತಾರೆ ಅಲ್ಲದೆ ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ.

Leave a Comment

Your email address will not be published. Required fields are marked *